Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...
ಗಜಲ್…
Share:
Poems

ಗಜಲ್…

February 16, 2026 ಜಬೀವುಲ್ಲಾ ಎಂ.ಅಸದ್
ಬದುಕೊಂದು ಪಯಣ ಸುಮ್ಮನೆ ನಡೆಯುತ ನೀ ಸಾಗು ನಿನ್ನ ಜೀವನ ಗಮ್ಯವ ಅರಿತು ನೆಮ್ಮದಿ ಅರಸುತ ನೀ ಸಾಗು ಯಾರಿಗೂ ಇಲ್ಲಿ ಯಾರಿಲ್ಲ ಯಾವುದೂ ಶಾಶ್ವತವಿಲ್ಲ ನಿನ್ನಲ್ಲಿರುವ ಪ್ರೀತಿಯನೆ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಹುಡುಕಾಟ…
ಹುಡುಕಾಟ…
August 8, 2021
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
Copyright © 2026 Bayalu