Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave a Reply to Jyothilingappa Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ಈ  ದಾರಿ…
ಈ ದಾರಿ…
May 10, 2023
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ನನ್ನ ಶರಣರು…
ನನ್ನ ಶರಣರು…
April 9, 2021
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
Copyright © 2025 Bayalu