Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವು-ಮರೆವಿನಾಟ
Share:
Poems August 8, 2021 ಕೆ.ಆರ್ ಮಂಗಳಾ

ಅರಿವು-ಮರೆವಿನಾಟ

ನೀನರಿಯೆ ನಾನಾರೆಂದು
ನಾಮರೆತೆ ನೀನಾರೆಂದು
ನನ್ನಲ್ಲೇ ನೀನಿದ್ದರೂ
ನಿನ್ನಿಂದಲೇ ನಾ ಬದುಕಿದ್ದರೂ…
ಇದೇ ಅಲ್ಲವೇ ವಿಸ್ಮಯ?

ನಾ-ನೀನೆಂಬ ಉಭಯವೇ ಇಲ್ಲ
ಭ್ರಮೆಗೆ ಬಲಿಯಾಗದೆ
ತಿಳಿದು ನೋಡೆಂದ ಗುರು-
ನೀನೇ ನಾನೋ, ನಾನೇ ನೀನೋ…
ಮತ್ತೇ ಶುರುವಾಯ್ತು ಗೊಂದಲ.

ನೀನು ನೀನೆಂದು
ಕನವರಿಸುತಿರುವುದೆಲ್ಲ ಬುದ್ಧಿಯ ಬೇಧ
ನಾನು ನಾನು ಎಂದು
ಬಡಬಡಿಸುತಿರುವುದೆಲ್ಲ ಮನದ ಕಸ

ಈ ತಿಪ್ಪೆಯ ಮೇಲೆ ಕೂತು
ಹಿಡಿಯಬಹುದೇ ಸತ್ಯದ ಕೈಯ?
ಅಂಟಿಸಿಕೊಂಡ ರೆಕ್ಕೆಗಳ ನೆಚ್ಚಿ
ಹಾರಲಾದೀತೆ ಬಯಲಿನತ್ತ?

ಬಣ್ಣಬಣ್ಣದ ಮಾತುಗಳೆಲ್ಲ
ಮೌನದಲಿ ಕರಗಿ
ಎಲ್ಲ ಖಾಲಿಯಾಗುವ ತನಕ
ಕೇಳಲಾದೀತೆ ಎದೆಯ ಗುಟ್ಟು?

Previous post ಹುಡುಕಾಟ…
ಹುಡುಕಾಟ…
Next post ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ

Related Posts

WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 2

  1. Jyothilingappa
    Aug 9, 2021 Reply

    ಬುದ್ಧಿಯ ಬೇಧ
    ಮನದ ಕಸ… ಆಹಾ!

  2. ಪೇರೂರು ಜಾರು, ಮಂಗಳೂರು
    Aug 14, 2021 Reply

    ಅರಿವು ಮರೆವು
    ಅರಿತೇ ಮರೆಯುವುದು
    ಅರಿಯದೇ ಮರೆಯುವುದು
    ಕೆಲವ ಕುರಿತು ಮರೆಯುವುದು
    ಬಯಲಾಗು ಮರೆಯುವುದು
    ಎಲ್ಲ ಆಟಕ್ಕೂ ಕೊನೆ ತಿಳಿ
    ಅದೇ ಅರಿವು ತಿಳಿಯದೊಡೆ
    ಬಾಳ ಮರೆವು
    ಆಟ ಮುಗಿಯಲೇ ಬೇಕು
    ಮಂಗಳ ಹಾಡಲೇ ಬೇಕು
    (ಮಂಗಳಾ ಬರೆಯಲೂ ಬೇಕು)

Leave a Reply to ಪೇರೂರು ಜಾರು, ಮಂಗಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
Copyright © 2025 Bayalu