Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರ್ಥ – ವ್ಯರ್ಥ
Share:
Poems April 5, 2026 ಜಬೀವುಲ್ಲಾ ಎಂ.ಅಸದ್

ಅರ್ಥ – ವ್ಯರ್ಥ

ಮುಗಿಲಿಗೆ ಜಿಗಿದ ಪಾದ
ಮಸ್ತಕದ ಕಂದಕದಲ್ಲಿ ಚಿಗುರಿ
ಶತಮಾನಗಳ ಮೊಳೆ ಹೊಡೆದ
ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು
ಕಾಲದ ಸಹಿಯಾಗಿ ಬದಲಾಗಿ
ಉಸಿರ ಗೊರಿಯೊಳಗೆ ಬೆರೆತು
ಹೆಜ್ಜೆ ಗುರುತುಗಳಲ್ಲಿ ಕಣ್ಣುಗಳು
ಬುಗುರಿಯಾಗಿ ಗರಗರ ತಿರುಗಿ
ಕುರುಡು ದಾರಿಯ ಅರಸಿ

ನೆರಳಿಗೆ ಬಿದ್ದ ಬೆಂಕಿ
ಯ ಆರಿಸುವ ಯತ್ನದಲಿ
ಆತ್ಮವೂ ಧಘಧಗಿಸಿ ಉರಿದು
ಆವಿಯಾಗಿ ಕರಗಿ
ಅನಂತತೆಯ ಶೂನ್ಯದಲಿ

ಹೊಕ್ಕುಳ ಬಳ್ಳಿ ಸುತ್ತಿದ ನಾಲಿಗೆ
ಚಡಪಡಿಸುತಿದೆ ಒಂದೇ ಸಮನೆ
ದಿಕ್ಕಿಲ್ಲದ ದೃಷ್ಟಿ ಗೋಡೆಗೆ ಬಡಿದು
ನೆಲಕೆ ಬಿದ್ದು ಹೊರಳಾಡಿ
ಅತ್ತು

ಕಂಬನಿಗಳ ಕನ್ನಡಿಯ ಯೋಮದಲ್ಲಿ
ಅಲೆಮಾರಿ ಒಂಟಿ ಹಕ್ಕಿಯ
ಅನಾಥ ಸದ್ದು ಮೊಳಗಿ
ರೆಕ್ಕೆ ಮುರಿದ ನೋವು ಹೂ ಮುಡಿದು
ಮಡಿದ ಹೃದಯದ ಮಣ್ಣಲ್ಲಿ ಹರಿದು
ಅಂತರಂಗದ ಕಣಿವೆಯಲಿ ನದಿಯಾಗಿ ಉಕ್ಕಿ
ಕಾಣದಾಯಿತು ಕಡಲು ಬಿಕ್ಕಿ

ಎಲ್ಲೊ ಬಿದ್ದಿದೆ ಆ ಮುರಿದ ಮರದ ಕಾಲು
ಸೂರ್ಯ ಸಾಯುವ ಈ ಸರಿಹೊತ್ತಲಿ
ಹೊತ್ತಿಸದ ದೀಪದ ನೆರಳನು
ಸುಮ್ಮನೆ ಹುಡುಕದಿರು ನೀನು

ಕತ್ತಲ ಬೀಜದ ಮೊಳಕೆಯ ಮಿಂಚು
ಹೊಂಚು ಹಾಕುತಿದೆ
ಕಟ್ಟಿದ ಅರಿವೆಯ ಬಿಡಿಸಿ
ಅರಿವಿನ ಕಂಗಳ ಮಿಡಿಸಿ
ಕಾಣು, ಕಾಣುವುದೇನು?
ಕಂಡರೆ, ಕಂಡಿಲ್ಲ ನೀನು
ಏನನ್ನೂ…

Previous post ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
Next post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...

Comments 1

  1. ಸಿದ್ದು ಪಾಟೀಲ್, ಗೌರಿಬಿದನೂರು
    Apr 9, 2026 Reply

    ಕಾಣುತ್ತಿರುವುದು, ಕಂಡೂ ಕಾಣದಿರುವುದು- ಇವುಗಳ ತಾಕಲಾಟದಲ್ಲಿ ಅರ್ಥಗಳು ವ್ಯರ್ಥಗಳಾಗಿ, ವ್ಯರ್ಥವೆಂದವುಗಳು ಅರ್ಥವನ್ನು ಹುದುಗಿಸಿಕೊಂಡ ಪರಿ ಈ ಜಗ, ಈ ಜೀವನ. ಸೊಗಸಾದ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಕುರುಹೇ ಬಯಲು
ಕುರುಹೇ ಬಯಲು
February 16, 2026
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ವಚನ–ಶ್ರಮಣಧಾರೆಗಳ ಸಂಧಿಭೂಮಿ
ವಚನ–ಶ್ರಮಣಧಾರೆಗಳ ಸಂಧಿಭೂಮಿ
April 5, 2026
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
Copyright © 2026 Bayalu