Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಗು ಕನ್ನಡಿಯಂತೆ…
Share:
Poems September 13, 2025 ಕೆ.ಆರ್ ಮಂಗಳಾ

ಆಗು ಕನ್ನಡಿಯಂತೆ…

ಗ್ರಹಿಸು
ಸಂಗ್ರಹಿಸಬೇಡ
ಏನನ್ನೂ…
ಕಂಡದ್ದು ಕೇಳಿದ್ದು
ಮೂಸಿದ್ದು ಮುಟ್ಟಿದ್ದು
ಅನುಭವಿಸಿದ್ದು
ಓದಿದ್ದು ಕೂಡ…

ತೂರಿಹೋಗಲಿ
ಅವಿತ
ವಾಸನೆಗಳೆಲ್ಲಾ
ಮುಗಿಬಿದ್ದು
ಬರುವ
ಯೋಚನೆಗಳೆಲ್ಲಾ
ಹೊಂಚು
ಹಾಕುವ
ಸಂಚಯಗಳೆಲ್ಲಾ…
ಸಂಕಲ್ಪ
ವಿಕಲ್ಪಗಳ
ತೊಳಲಾಟಗಳೆಲ್ಲಾ…

ಮಾತು
ಬಲಿಯದ ಮುನ್ನ
ಮೌನ ತಾಳು
ಮೌನ
ಕರಗುವ ಮುನ್ನ
ಖಾಲಿಯಾಗು…

ಸಹನಳಾಗು
ಭೂಮಿಯಂತೆ
ಸ್ವತಂತ್ರವಾಗಿರು
ಗಾಳಿಯಂತೆ
ಹರಿಯುತಿರು
ನೀರಿನಂತೆ
ಶುದ್ಧವಾಗಿರು
ಬೆಂಕಿಯಂತೆ
ಮುಕ್ತವಾಗಿರು
ಆಗಸದಂತೆ…

ಗುರು-
ಎಲ್ಲ ಹೇಳಿಯೂ
ಹೇಳದ ಗುಟ್ಟು…
ತೋರುವ ಕನ್ನಡಿ
ಕೂಡಿಡದು ಏನನೂ…
ಕನ್ನಡಿಯಾದರಲ್ಲವೆ
ಮನವೆಂಬುದು
ಬೇರಲ್ಲಾ
ಮಹಾದೇವನ ಅರುಹು.

Previous post ನಾನು  ಬಿಂಬ
ನಾನು ಬಿಂಬ
Next post ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...

Comments 1

  1. ಸುರೇಶ್ ಪಾಟೀಲ್
    Oct 2, 2025 Reply

    ಅಕ್ಕಾ, ಪದೇಪದೇ ಓದಿಸಿಕೊಳ್ಳುವ ಮಾತುಗಳಿವೆ ನಿಮ್ಮ ಕವನದಲ್ಲಿ, ಬಹಳ ಹಿಡಿಸಿತು. ಅಂತಹ ಗುರು ಸಿಗುವ ಪುಣ್ಯ ಎಲ್ಲರಿಗೂ ಇರುವುದಿಲ್ಲ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
Copyright © 2026 Bayalu