Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಗು ಕನ್ನಡಿಯಂತೆ…
Share:
Poems September 13, 2025 ಕೆ.ಆರ್ ಮಂಗಳಾ

ಆಗು ಕನ್ನಡಿಯಂತೆ…

ಗ್ರಹಿಸು
ಸಂಗ್ರಹಿಸಬೇಡ
ಏನನ್ನೂ…
ಕಂಡದ್ದು ಕೇಳಿದ್ದು
ಮೂಸಿದ್ದು ಮುಟ್ಟಿದ್ದು
ಅನುಭವಿಸಿದ್ದು
ಓದಿದ್ದು ಕೂಡ…

ತೂರಿಹೋಗಲಿ
ಅವಿತ
ವಾಸನೆಗಳೆಲ್ಲಾ
ಮುಗಿಬಿದ್ದು
ಬರುವ
ಯೋಚನೆಗಳೆಲ್ಲಾ
ಹೊಂಚು
ಹಾಕುವ
ಸಂಚಯಗಳೆಲ್ಲಾ…
ಸಂಕಲ್ಪ
ವಿಕಲ್ಪಗಳ
ತೊಳಲಾಟಗಳೆಲ್ಲಾ…

ಮಾತು
ಬಲಿಯದ ಮುನ್ನ
ಮೌನ ತಾಳು
ಮೌನ
ಕರಗುವ ಮುನ್ನ
ಖಾಲಿಯಾಗು…

ಸಹನಳಾಗು
ಭೂಮಿಯಂತೆ
ಸ್ವತಂತ್ರವಾಗಿರು
ಗಾಳಿಯಂತೆ
ಹರಿಯುತಿರು
ನೀರಿನಂತೆ
ಶುದ್ಧವಾಗಿರು
ಬೆಂಕಿಯಂತೆ
ಮುಕ್ತವಾಗಿರು
ಆಗಸದಂತೆ…

ಗುರು-
ಎಲ್ಲ ಹೇಳಿಯೂ
ಹೇಳದ ಗುಟ್ಟು…
ತೋರುವ ಕನ್ನಡಿ
ಕೂಡಿಡದು ಏನನೂ…
ಕನ್ನಡಿಯಾದರಲ್ಲವೆ
ಮನವೆಂಬುದು
ಬೇರಲ್ಲಾ
ಮಹಾದೇವನ ಅರುಹು.

Previous post ನಾನು  ಬಿಂಬ
ನಾನು ಬಿಂಬ
Next post ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...

Comments 1

  1. ಸುರೇಶ್ ಪಾಟೀಲ್
    Oct 2, 2025 Reply

    ಅಕ್ಕಾ, ಪದೇಪದೇ ಓದಿಸಿಕೊಳ್ಳುವ ಮಾತುಗಳಿವೆ ನಿಮ್ಮ ಕವನದಲ್ಲಿ, ಬಹಳ ಹಿಡಿಸಿತು. ಅಂತಹ ಗುರು ಸಿಗುವ ಪುಣ್ಯ ಎಲ್ಲರಿಗೂ ಇರುವುದಿಲ್ಲ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಗಣಾಚಾರ
ಗಣಾಚಾರ
August 8, 2021
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಹುಡುಕಾಟ
ಹುಡುಕಾಟ
July 21, 2024
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
Copyright © 2026 Bayalu