Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಗು ಕನ್ನಡಿಯಂತೆ…
Share:
Poems September 13, 2025 ಕೆ.ಆರ್ ಮಂಗಳಾ

ಆಗು ಕನ್ನಡಿಯಂತೆ…

ಗ್ರಹಿಸು
ಸಂಗ್ರಹಿಸಬೇಡ
ಏನನ್ನೂ…
ಕಂಡದ್ದು ಕೇಳಿದ್ದು
ಮೂಸಿದ್ದು ಮುಟ್ಟಿದ್ದು
ಅನುಭವಿಸಿದ್ದು
ಓದಿದ್ದು ಕೂಡ…

ತೂರಿಹೋಗಲಿ
ಅವಿತ
ವಾಸನೆಗಳೆಲ್ಲಾ
ಮುಗಿಬಿದ್ದು
ಬರುವ
ಯೋಚನೆಗಳೆಲ್ಲಾ
ಹೊಂಚು
ಹಾಕುವ
ಸಂಚಯಗಳೆಲ್ಲಾ…
ಸಂಕಲ್ಪ
ವಿಕಲ್ಪಗಳ
ತೊಳಲಾಟಗಳೆಲ್ಲಾ…

ಮಾತು
ಬಲಿಯದ ಮುನ್ನ
ಮೌನ ತಾಳು
ಮೌನ
ಕರಗುವ ಮುನ್ನ
ಖಾಲಿಯಾಗು…

ಸಹನಳಾಗು
ಭೂಮಿಯಂತೆ
ಸ್ವತಂತ್ರವಾಗಿರು
ಗಾಳಿಯಂತೆ
ಹರಿಯುತಿರು
ನೀರಿನಂತೆ
ಶುದ್ಧವಾಗಿರು
ಬೆಂಕಿಯಂತೆ
ಮುಕ್ತವಾಗಿರು
ಆಗಸದಂತೆ…

ಗುರು-
ಎಲ್ಲ ಹೇಳಿಯೂ
ಹೇಳದ ಗುಟ್ಟು…
ತೋರುವ ಕನ್ನಡಿ
ಕೂಡಿಡದು ಏನನೂ…
ಕನ್ನಡಿಯಾದರಲ್ಲವೆ
ಮನವೆಂಬುದು
ಬೇರಲ್ಲಾ
ಮಹಾದೇವನ ಅರುಹು.

Previous post ನಾನು  ಬಿಂಬ
ನಾನು ಬಿಂಬ

Related Posts

ನನ್ನೊಳಗಿನ ನೀನು
Share:
Poems

ನನ್ನೊಳಗಿನ ನೀನು

April 29, 2018 ಕೆ.ಆರ್ ಮಂಗಳಾ
ನಿನ್ನೆ ನಾಳೆಯ ನಡುವೆ ಜೀವಯಾನ ಮಾತು-ಮೌನದ ನಡುವೆ ಭಾವಯಾನ… ಅಲ್ಲಿಷ್ಟು ಇಲ್ಲಿಷ್ಟು ಆಗಸದ ಅಗಲಕ್ಕೂ ಹರಿದ ಹತ್ತಿಯ ತುಂಡು ಮನದ ಭಿತ್ತಿಯ ಮೇಲೆ ಅಸ್ಪಷ್ಟ ಹೆಜ್ಜೆ ಗುರುತು ಕಳವಳದ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 1

  1. ಸುರೇಶ್ ಪಾಟೀಲ್
    Oct 2, 2025 Reply

    ಅಕ್ಕಾ, ಪದೇಪದೇ ಓದಿಸಿಕೊಳ್ಳುವ ಮಾತುಗಳಿವೆ ನಿಮ್ಮ ಕವನದಲ್ಲಿ, ಬಹಳ ಹಿಡಿಸಿತು. ಅಂತಹ ಗುರು ಸಿಗುವ ಪುಣ್ಯ ಎಲ್ಲರಿಗೂ ಇರುವುದಿಲ್ಲ.

Leave a Reply to ಸುರೇಶ್ ಪಾಟೀಲ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಹುಡುಕಾಟ
ಹುಡುಕಾಟ
July 21, 2024
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
Copyright © 2025 Bayalu