Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಗಣಾಚಾರ
ಗಣಾಚಾರ
August 8, 2021
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
Copyright © 2026 Bayalu