Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ಕ್ವಾಂಟಮ್ ಮೋಡಿ
Share:
Poems

ಕ್ವಾಂಟಮ್ ಮೋಡಿ

November 9, 2021 ಜ್ಯೋತಿಲಿಂಗಪ್ಪ
ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…
May 8, 2024
ನಡೆಯ ಎಡೆ…
ನಡೆಯ ಎಡೆ…
April 5, 2026
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
Copyright © 2026 Bayalu