Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನವೇ ಮನವೇ…
ಮನವೇ ಮನವೇ…
May 6, 2020
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಗಣಾಚಾರ
ಗಣಾಚಾರ
August 8, 2021
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
Copyright © 2026 Bayalu