Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ಗಡಿಯಲ್ಲಿ ನಿಂತು…
Share:
Poems

ಗಡಿಯಲ್ಲಿ ನಿಂತು…

May 6, 2021 ಜ್ಯೋತಿಲಿಂಗಪ್ಪ
ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
Copyright © 2026 Bayalu