Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave a Reply to Vinayak Narasapura Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ನೆಮ್ಮದಿ
ನೆಮ್ಮದಿ
April 6, 2020
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ದಾಸೋಹ ತತ್ವ
ದಾಸೋಹ ತತ್ವ
January 10, 2021
Copyright © 2026 Bayalu