Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದಷ್ಟೇ…
Share:
Poems January 10, 2021 ಜ್ಯೋತಿಲಿಂಗಪ್ಪ

ಇದ್ದಷ್ಟೇ…

ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ
ಇರುವಷ್ಟು ಇರುವುದು ಇದ್ದ ಹಾಗೆ ಇರು

ಕನಸು ಇದ್ದಾಗಷ್ಟೇ ಕನಸು ಇರುವುದು
ಎಚ್ಚರಾದರೆ ಕನಸು ಕನವರಿಸುವುದು

ಎಚ್ಚರಾಗು ಉದಯದ ಮೊದಲ ಕಿರಣ ಕಣ್ಣ ತುಂಬಲಿ
ಈಗಷ್ಟೇ ಮುಂಝಾವದ ಕನಸು ಕಳೆದಿದೆ

ಕಳೆದಿರುಳಿನ ನಿರ್ಮೌನ ನಿನ್ನೆ ಕಳೆದಿದೆ
ನೆನಹುಗಳು ಒಂದೊಂದು ತೂರಿ ಬರುವದರಲಿ ತೂರಿ ಬಿಡು
ತೋರುವ ದಾರಿಯಲಿ ಕತ್ತಲೂ ಇದೆ ಬೆಳಕೂ ಇದೆ

ಮೆಟ್ಟಲುಗಳಿಲ್ಲದ ಬಾವಿ ಬಿಂಬ ಕಾಣದು
ಅಪ್ಪುವಿನಿಂದೆದ್ದ ಕೆಂಡದಲಿ ಜ್ಯೊತಿ ಇದೆ

ಬಯಲು ನುಡಿಯಲಾಗದು ಎಂದೇನಲ್ಲ
ಇದೇ ಎಂದು ನುಡಿಯಬಾರದು

ಅಳತೆ ಇಲ್ಲದೆ ಅಳೆಯುವ ಕಣ್ಣು ನನದಲ್ಲ.

Previous post ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
Next post ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ

Related Posts

ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...

Comments 1

  1. Karthik Mannur
    Jan 14, 2021 Reply

    ಯಾವುದು ಕನಸು, ಯಾವುದು ಎಚ್ಚರ? ಎರಡರಲ್ಲೂ ಜೀವ ಬಳಲುತ್ತದೆ! ಸುಂದರ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಕುರುಹೇ ಬಯಲು
ಕುರುಹೇ ಬಯಲು
February 16, 2026
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
Copyright © 2026 Bayalu