Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
December 9, 2025
ಭಾರ
ಭಾರ
October 6, 2020
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
Copyright © 2026 Bayalu