Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...
ಹುಡುಕಾಟ
Share:
Poems

ಹುಡುಕಾಟ

July 21, 2024 ಜ್ಯೋತಿಲಿಂಗಪ್ಪ
ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಶಿವನ ಕುದುರೆ…
ಶಿವನ ಕುದುರೆ…
May 1, 2019
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಮನೆ ನೋಡಾ ಬಡವರು
ಮನೆ ನೋಡಾ ಬಡವರು
April 29, 2018
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
Copyright © 2026 Bayalu