Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...
ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ಕಾದಿ ಗೆಲಿಸಯ್ಯ ಎನ್ನನು
ಕಾದಿ ಗೆಲಿಸಯ್ಯ ಎನ್ನನು
April 29, 2018
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
January 8, 2023
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಮಾತು ಮಾಯೆ
ಮಾತು ಮಾಯೆ
July 4, 2021
Copyright © 2026 Bayalu