Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವಯೋಗ
ಶಿವಯೋಗ
July 4, 2021
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
ಲಿಂಗಾಯತ ಸಂಘ-ಸಂಸ್ಥೆಗಳು (ಇತಿಹಾಸದ ಒಂದು ನೋಟ)
September 6, 2023
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಗ್ರಹಣ
ಗ್ರಹಣ
December 9, 2025
ಮರೆತೆ…
ಮರೆತೆ…
July 4, 2022
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
Copyright © 2026 Bayalu