Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಕ್ಷಣದ ಸತ್ಯ
Share:
Poems March 12, 2022 ಕೆ.ಆರ್ ಮಂಗಳಾ

ಈ ಕ್ಷಣದ ಸತ್ಯ

ಧಗಧಗಿಸಿ ಮೇಲೇರುತಿಹ
ಕೆನ್ನಾಲಿಗೆಯ ಈ ಬೆಂಕಿ
ಅಡಗಿತ್ತು ಎಲ್ಲಿ?
ಮರದ ಬೊಡ್ಡೆಯಲೋ?
ಒಣಗಿದ ಸೌದೆಯಲೋ,
ಮದ್ದಗೀರಿದ ಕಡ್ಡಿಯಲ್ಲೋ,
ಊದುತಿಹ ಗಾಳಿಯಲ್ಲೋ?
ಎಲ್ಲಿಂದ ಬಂತು
ಕಣ್ಣ ಕೋರೈಸುವ ಈ ಬೆಳಕು,
ಚಕಮಕದ ಹೊಳಪು,
ಈ ಝಳದ ಧಗೆಯು?
ಆ ಬೊಡ್ಡೆ, ಆ ಒಣಗಿದೆಲೆ,
ಆ ಕಿಡಿಯ ಬೆಸುಗೆಯಲಿ
ಇತ್ತೇ ಇಂಥ ಮೋಹಕದ ಚಳಕ?

ಗಾಳಿಯಲಿ ಕೈ ಬೀಸಿ
ಬಾಚಿಕೊಳಬಹುದೇ ಶಾಖವನು
ಮುಂದಣ ಚಳಿಗೂ ಆದೀತೆಂದು?
ಗಾಜಿನ ಸೀಸೆಯೊಳಗೆ
ತುಂಬಿಕೊಳಬಹುದೇ ಬೆಳಕ
ನಾಳಿನಿರುಳಿಗೆ ಇರಲೆಂದು?
ನಿನ್ನೆಯ ಭೂತವನು
ಬೆನ್ನೇರಿಸಿಕೊಂಡ ಮನಕೆ
ಸದಾ ನಾಳೆಯದೇ ಚಿಂತೆ…

ಈ ಕ್ಷಣಕಾದರೋ
ಹಿಂದು-ಮುಂದುಗಳಿಲ್ಲ
ದಂದುಗದ ಹಂಗಿಲ್ಲ
ಇಲ್ಲೇ, ಈಗಲೇ
ಉರಿದುರಿದು ತೋರಿ,
ತೋರುತ್ತಲೇ ಮರೆಯಾಗಿ
ಕಣ್ಣ ಮುಂದಲೇ ಕರಗುತಿಹ
ಆ ಬೆಂಕಿಗೂ,
ನನ್ನೊಡಲ ಪ್ರಾಣಕ್ಕೂ
ಇಹುದೇ ಏನಾದರೂ ಅಂತರ?

Previous post ಒಳಗಣ ಮರ
ಒಳಗಣ ಮರ
Next post ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...

Comments 1

  1. Andanappa
    Mar 23, 2022 Reply

    ಬೆಂಕಿಗೂ ಪ್ರಾಣಕ್ಕೂ ಮೂಲಸಂಬಂಧ ಯಾವುದು? ಇದೇ ನಿರಂತರ ಹುಡುಕುವಿಕೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಒಳಗಣ ಮರ
ಒಳಗಣ ಮರ
March 12, 2022
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
Copyright © 2026 Bayalu