Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಬಳ್ಳಿ…
Share:
Poems October 21, 2024 ಜ್ಯೋತಿಲಿಂಗಪ್ಪ

ಈ ಬಳ್ಳಿ…

ಗಾಳಿ
ಉರಿಸುವುದು ಆರಿಸುವುದು
ದೀಪ
ಬೆಳಗಿಸುವುದು ಯಾರು…?

ನಾನೂ
ಒಂದು ದೀಪ ದ್ವೀಪದ ದಡ
ಕಾಯುತ್ತಾ ಕಾಯುತ್ತಾ
ಅಲೆ
ಎಣಿಸುತಿರುವೆ ಈ
ಸಂಖ್ಯೆ ಮೂರನ್ನು ದಾಟದೇ…

ಈ
ಹಿತ್ತಲ ಗಿಡ
ಹಾಡುತಿರುವ ಹಾಡು ಕೇಳಿ

ಆಸೆ
ಪಡುವುದು ಬಿಟ್ಟೆ
ನೇ…

ಈ
ಬಳ್ಳಿಯೇ ಹಾಗೆ
ಮರ
ತಬ್ಬುವುದು ಇಲ್ಲಾ
ನೆಲಕೆ ಹಬ್ಬುವುದು.

*** *** ***

ನದಿ ಒಣಗಿದೆ ನೀರು ಶುದ್ಧ
ಕಣ್ಣು ಒಣಗಿದೆ ನೋಟ ಶುದ್ಧ
ಕಿವಿ ಒಣಗಿದೆ ಶಬ್ದ ಶುದ್ಧ
ನಾಲಿಗೆ ಒಣಗಿದೆ ರುಚಿ ಶುದ್ಧ
ನಾಸಿಕ ಒಣಗಿದೆ ವಾಸನೆ ಶುದ್ಧ
ತೊಕ್ಕು ಒಣಗಿದೆ ಸ್ಪರ್ಶ ಶುದ್ಧ

ಆಸೆ ಒಣಗಿದೆ ಧ್ಯಾನ ಶುದ್ಧ.

Previous post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
Next post ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?

Related Posts

ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
ಹೆಸರಿಲ್ಲದಾ ಊರಿನ ಹಾಡು
Share:
Poems

ಹೆಸರಿಲ್ಲದಾ ಊರಿನ ಹಾಡು

May 6, 2020 ಪದ್ಮಾಲಯ ನಾಗರಾಜ್
ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...

Comments 2

  1. ಬಸವರಾಜ್ ತೋರಣಕಲ್
    Oct 24, 2024 Reply

    ಅಮೂರ್ತವಾಗಿ ಸೂಚ್ಯವಾಗಿರುವ ಜ್ಯೋತಿಲಿಂಗಪ್ಪ ಅವರ ಕವನಗಳ ಓದು ಗಾಢ ಅನುಭೂತಿಯನ್ನು ನೀಡುತ್ತವೆ.

  2. Susheela Sagar
    Nov 1, 2024 Reply

    ಈ ಬಳ್ಳಿಯ ಮರ ಯಾವುದು? ಅದು ಹಬ್ಬಿ ಹರಡೋದು ಭುವಿಯ ಮಣ್ಣಲ್ಲೇ, ಅತುಕೊಳ್ಳೋದು ಮರದ ಕಾಂಡಕ್ಕೇ!! ತಾತ್ವಿಕ ನೆಲೆಗಟ್ಟಿನ ವಿಚಾರಗಳು ಕವನದಲ್ಲಿ ಮೂಡಿಬಂದ ಪರಿ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ವೀರ
ವೀರ
April 29, 2018
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
Copyright © 2026 Bayalu