Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಬಳ್ಳಿ…
Share:
Poems October 21, 2024 ಜ್ಯೋತಿಲಿಂಗಪ್ಪ

ಈ ಬಳ್ಳಿ…

ಗಾಳಿ
ಉರಿಸುವುದು ಆರಿಸುವುದು
ದೀಪ
ಬೆಳಗಿಸುವುದು ಯಾರು…?

ನಾನೂ
ಒಂದು ದೀಪ ದ್ವೀಪದ ದಡ
ಕಾಯುತ್ತಾ ಕಾಯುತ್ತಾ
ಅಲೆ
ಎಣಿಸುತಿರುವೆ ಈ
ಸಂಖ್ಯೆ ಮೂರನ್ನು ದಾಟದೇ…

ಈ
ಹಿತ್ತಲ ಗಿಡ
ಹಾಡುತಿರುವ ಹಾಡು ಕೇಳಿ

ಆಸೆ
ಪಡುವುದು ಬಿಟ್ಟೆ
ನೇ…

ಈ
ಬಳ್ಳಿಯೇ ಹಾಗೆ
ಮರ
ತಬ್ಬುವುದು ಇಲ್ಲಾ
ನೆಲಕೆ ಹಬ್ಬುವುದು.

*** *** ***

ನದಿ ಒಣಗಿದೆ ನೀರು ಶುದ್ಧ
ಕಣ್ಣು ಒಣಗಿದೆ ನೋಟ ಶುದ್ಧ
ಕಿವಿ ಒಣಗಿದೆ ಶಬ್ದ ಶುದ್ಧ
ನಾಲಿಗೆ ಒಣಗಿದೆ ರುಚಿ ಶುದ್ಧ
ನಾಸಿಕ ಒಣಗಿದೆ ವಾಸನೆ ಶುದ್ಧ
ತೊಕ್ಕು ಒಣಗಿದೆ ಸ್ಪರ್ಶ ಶುದ್ಧ

ಆಸೆ ಒಣಗಿದೆ ಧ್ಯಾನ ಶುದ್ಧ.

Previous post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
Next post ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?

Related Posts

ಆಗು ಕನ್ನಡಿಯಂತೆ…
Share:
Poems

ಆಗು ಕನ್ನಡಿಯಂತೆ…

September 13, 2025 ಕೆ.ಆರ್ ಮಂಗಳಾ
ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 2

  1. ಬಸವರಾಜ್ ತೋರಣಕಲ್
    Oct 24, 2024 Reply

    ಅಮೂರ್ತವಾಗಿ ಸೂಚ್ಯವಾಗಿರುವ ಜ್ಯೋತಿಲಿಂಗಪ್ಪ ಅವರ ಕವನಗಳ ಓದು ಗಾಢ ಅನುಭೂತಿಯನ್ನು ನೀಡುತ್ತವೆ.

  2. Susheela Sagar
    Nov 1, 2024 Reply

    ಈ ಬಳ್ಳಿಯ ಮರ ಯಾವುದು? ಅದು ಹಬ್ಬಿ ಹರಡೋದು ಭುವಿಯ ಮಣ್ಣಲ್ಲೇ, ಅತುಕೊಳ್ಳೋದು ಮರದ ಕಾಂಡಕ್ಕೇ!! ತಾತ್ವಿಕ ನೆಲೆಗಟ್ಟಿನ ವಿಚಾರಗಳು ಕವನದಲ್ಲಿ ಮೂಡಿಬಂದ ಪರಿ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
Copyright © 2026 Bayalu