Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಬಳ್ಳಿ…
Share:
Poems October 21, 2024 ಜ್ಯೋತಿಲಿಂಗಪ್ಪ

ಈ ಬಳ್ಳಿ…

ಗಾಳಿ
ಉರಿಸುವುದು ಆರಿಸುವುದು
ದೀಪ
ಬೆಳಗಿಸುವುದು ಯಾರು…?

ನಾನೂ
ಒಂದು ದೀಪ ದ್ವೀಪದ ದಡ
ಕಾಯುತ್ತಾ ಕಾಯುತ್ತಾ
ಅಲೆ
ಎಣಿಸುತಿರುವೆ ಈ
ಸಂಖ್ಯೆ ಮೂರನ್ನು ದಾಟದೇ…

ಈ
ಹಿತ್ತಲ ಗಿಡ
ಹಾಡುತಿರುವ ಹಾಡು ಕೇಳಿ

ಆಸೆ
ಪಡುವುದು ಬಿಟ್ಟೆ
ನೇ…

ಈ
ಬಳ್ಳಿಯೇ ಹಾಗೆ
ಮರ
ತಬ್ಬುವುದು ಇಲ್ಲಾ
ನೆಲಕೆ ಹಬ್ಬುವುದು.

*** *** ***

ನದಿ ಒಣಗಿದೆ ನೀರು ಶುದ್ಧ
ಕಣ್ಣು ಒಣಗಿದೆ ನೋಟ ಶುದ್ಧ
ಕಿವಿ ಒಣಗಿದೆ ಶಬ್ದ ಶುದ್ಧ
ನಾಲಿಗೆ ಒಣಗಿದೆ ರುಚಿ ಶುದ್ಧ
ನಾಸಿಕ ಒಣಗಿದೆ ವಾಸನೆ ಶುದ್ಧ
ತೊಕ್ಕು ಒಣಗಿದೆ ಸ್ಪರ್ಶ ಶುದ್ಧ

ಆಸೆ ಒಣಗಿದೆ ಧ್ಯಾನ ಶುದ್ಧ.

Previous post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
Next post ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?

Related Posts

ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...
ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...

Comments 2

  1. ಬಸವರಾಜ್ ತೋರಣಕಲ್
    Oct 24, 2024 Reply

    ಅಮೂರ್ತವಾಗಿ ಸೂಚ್ಯವಾಗಿರುವ ಜ್ಯೋತಿಲಿಂಗಪ್ಪ ಅವರ ಕವನಗಳ ಓದು ಗಾಢ ಅನುಭೂತಿಯನ್ನು ನೀಡುತ್ತವೆ.

  2. Susheela Sagar
    Nov 1, 2024 Reply

    ಈ ಬಳ್ಳಿಯ ಮರ ಯಾವುದು? ಅದು ಹಬ್ಬಿ ಹರಡೋದು ಭುವಿಯ ಮಣ್ಣಲ್ಲೇ, ಅತುಕೊಳ್ಳೋದು ಮರದ ಕಾಂಡಕ್ಕೇ!! ತಾತ್ವಿಕ ನೆಲೆಗಟ್ಟಿನ ವಿಚಾರಗಳು ಕವನದಲ್ಲಿ ಮೂಡಿಬಂದ ಪರಿ ಚೆನ್ನಾಗಿದೆ.

Leave a Reply to ಬಸವರಾಜ್ ತೋರಣಕಲ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಗುರುಪಥ
ಗುರುಪಥ
January 4, 2020
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಹಾಯ್ಕು
ಹಾಯ್ಕು
September 6, 2023
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
April 11, 2025
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
Copyright © 2026 Bayalu