Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
Copyright © 2026 Bayalu