Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
Copyright © 2025 Bayalu