Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಗೆರೆ ಎಳೆಯದೆ…
Share:
Poems

ಗೆರೆ ಎಳೆಯದೆ…

October 13, 2022 ಜ್ಯೋತಿಲಿಂಗಪ್ಪ
ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಡುಕಾಟ
ಹುಡುಕಾಟ
July 21, 2024
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಶಿವಾಚಾರ
ಶಿವಾಚಾರ
April 9, 2021
Copyright © 2026 Bayalu