Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಗಜಲ್…
Share:
Poems

ಗಜಲ್…

February 16, 2026 ಜಬೀವುಲ್ಲಾ ಎಂ.ಅಸದ್
ಬದುಕೊಂದು ಪಯಣ ಸುಮ್ಮನೆ ನಡೆಯುತ ನೀ ಸಾಗು ನಿನ್ನ ಜೀವನ ಗಮ್ಯವ ಅರಿತು ನೆಮ್ಮದಿ ಅರಸುತ ನೀ ಸಾಗು ಯಾರಿಗೂ ಇಲ್ಲಿ ಯಾರಿಲ್ಲ ಯಾವುದೂ ಶಾಶ್ವತವಿಲ್ಲ ನಿನ್ನಲ್ಲಿರುವ ಪ್ರೀತಿಯನೆ...
ನಿಜ ನನಸಿನ ತಾವ…
Share:
Poems

ನಿಜ ನನಸಿನ ತಾವ…

July 10, 2023 ಕೆ.ಆರ್ ಮಂಗಳಾ
ಕಣ್ಣು ಮುಚ್ಚಿದಾಗ ಬರುವ ಕನಸಿಗೂ ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ ಏನಿಹುದು ಅಂತರ? ನಗು, ಅಳು, ನೋವು, ಸಂಕಟ… ಅನುಭವದಲ್ಲಿ ಅದ್ದಿ ತೆಗೆದಂತೆ ಎಲ್ಲ ಎದುರೆದುರೇ ನಡೆದಂತೆ!...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಮಾಯದ ಗಾಯ
ಮಾಯದ ಗಾಯ
October 19, 2025
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
Copyright © 2026 Bayalu