Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಕಣ್ಣ ದೀಪ
ಕಣ್ಣ ದೀಪ
September 7, 2021
Copyright © 2026 Bayalu