Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರಡು ಎಲ್ಲಿ?
Share:
Poems October 5, 2021 ಕೆ.ಆರ್ ಮಂಗಳಾ

ಎರಡು ಎಲ್ಲಿ?

ನಾನು ದ್ವೈತವೋ ಅದ್ವೈತವೋ
ಹೀಗೊಂದು ಪ್ರಶ್ನೆ ಎದ್ದದ್ದೇ ತಡ
ನಡೆದಿತ್ತು ಒಳಗೊಂದು ತಾಕಲಾಟ-

ಒಂದೆಡೆ-
ನೆನಪುಗಳಿಗೆ, ಕನಸುಗಳಿಗೆ
ಪ್ರೀತಿಯ ಕನವರಿಕೆಗಳಿಗೆ
ಎದೆಯ ಹಂಬಲಗಳಿಗೆಲ್ಲ
ನಾನೇ ಕರುಳಿನ ಸೆಲೆ
ಪೋಣಿಸುತಾ ಮಾತುಗಳ
ನಾನಿಲ್ಲದೆ ನೀನಿಲ್ಲ ಎಂದಿತು ಮನ.

ಇನ್ನೊಂದೆಡೆ-
ಪರವಸ್ತುವಿನ ಪ್ರತಿನಿಧಿ ನಾ
ಜಗತ್ಕರ್ತನ ಪ್ರತಿಬಿಂಬ
ಎಲ್ಲದರ ಸೂತ್ರಧಾರಿ
ನಾನೇ ಅಂತಿಮಸತ್ಯ
ಆತ್ಮದ ಪರ ನಡೆದಿತ್ತು
ಚಿತ್ತದ ವಕಾಲತ್ತು.

ಮನವು ಕಲ್ಪನೆಯಾಟ
ಆತ್ಮ ಜ್ಞಾನದ ನೋಟ
ಮನವು- ಆತ್ಮಗಳೆರಡೂ
ನಾನಲ್ಲ ಗುರುವೇ.
ಇಲ್ಲದ ಮನವೂ ಅಲ್ಲ
ಕಲ್ಪಿತ ಆತ್ಮನೂ ಅಲ್ಲ
ಎರಡರ ಹಂಗಳಿದಲ್ಲದೆ
ಆಳ-ನಿರಾಳವಿಲ್ಲ.

Previous post ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
Next post ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
July 10, 2025
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
Copyright © 2026 Bayalu