Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಕಣ್ಣ ದೀಪ
ಕಣ್ಣ ದೀಪ
September 7, 2021
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಶಾಂತಿ
ಶಾಂತಿ
April 11, 2025
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ಗುರುವಂದನೆ
ಗುರುವಂದನೆ
October 13, 2022
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
Copyright © 2026 Bayalu