Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...
ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಮಹಾನುಭಾವಿ ಆದಯ್ಯ
ಮಹಾನುಭಾವಿ ಆದಯ್ಯ
April 29, 2018
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಮಣ್ಣಿನ ಹೃದಯದಲಿ
ಮಣ್ಣಿನ ಹೃದಯದಲಿ
September 13, 2025
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
Copyright © 2025 Bayalu