Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಒಂದಾಗಿ ನಿಂತೆ…
Share:
Poems

ಒಂದಾಗಿ ನಿಂತೆ…

April 6, 2024 ಕೆ.ಆರ್ ಮಂಗಳಾ
ಆಗೀಗ ನೀರು ಕಾಣುವ ಮಧುಮಾಲತಿ ಬಳ್ಳಿಯಲಿ ತೊನೆವ ಕೆಂಪು-ಬಿಳಿ ಹೂಗಳು ಪಕ್ಕದಲ್ಲೇ ನಸುಗಂಪಿನ ದುಂಡು ಮಲ್ಲಿಗೆಯ ದಂಡು ದೇಟಿನ ತುಂಬ ಬಣ್ಣಬಣ್ಣದ ದಾಸವಾಳ, ಅರೆಬೆತ್ತಲಾದ ಸಂಪಿಗೆ...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
April 6, 2023
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಶಿವನ ಕುದುರೆ…
ಶಿವನ ಕುದುರೆ…
May 1, 2019
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
Copyright © 2026 Bayalu