Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
Copyright © 2026 Bayalu