Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ಪೊರೆವ ದನಿ…
Share:
Poems

ಪೊರೆವ ದನಿ…

August 11, 2025 ಕೆ.ಆರ್ ಮಂಗಳಾ
ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶೂನ್ಯ ತುಂಬಿಕೊಂಡ ಬಿಂದಿಗೆ
ಶೂನ್ಯ ತುಂಬಿಕೊಂಡ ಬಿಂದಿಗೆ
September 6, 2026
ನಾನು  ಬಿಂಬ
ನಾನು ಬಿಂಬ
September 13, 2025
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಆಸರೆ
ಆಸರೆ
August 6, 2022
ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ
January 10, 2021
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
Copyright © 2026 Bayalu