Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

October 21, 2024 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೆಲದ ನಿಧಾನ
ನೆಲದ ನಿಧಾನ
April 29, 2018
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)
December 13, 2024
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
ಬಯಲಾಟ
ಬಯಲಾಟ
March 17, 2021
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
Copyright © 2026 Bayalu