Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಸಂತೆಯ ಸಂತ
Share:
Poems

ಸಂತೆಯ ಸಂತ

September 7, 2020 ಜ್ಯೋತಿಲಿಂಗಪ್ಪ
ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...
ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave a Reply to ಪೆರೂರು ಜಾರು, ಉಡುಪಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
WHO AM I?
WHO AM I?
June 17, 2020
ತುತ್ತೂರಿ…
ತುತ್ತೂರಿ…
June 10, 2023
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
Copyright © 2025 Bayalu