Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಮಾತು ಮಾಯೆ
ಮಾತು ಮಾಯೆ
July 4, 2021
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
Copyright © 2026 Bayalu