Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಗೇಣು ದಾರಿ
ಗೇಣು ದಾರಿ
July 10, 2023
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
Copyright © 2026 Bayalu