Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ಕಾಯೋ ಗುರುವೇ…
Share:
Poems

ಕಾಯೋ ಗುರುವೇ…

February 11, 2022 ಕೆ.ಆರ್ ಮಂಗಳಾ
ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...
ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಸಂತೆಯ ಸಂತ
ಸಂತೆಯ ಸಂತ
September 7, 2020
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಕುರುಹೇ ಬಯಲು
ಕುರುಹೇ ಬಯಲು
February 16, 2026
ನಾನು ಯಾರು?
ನಾನು ಯಾರು?
December 8, 2021
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ನೆಮ್ಮದಿ
ನೆಮ್ಮದಿ
April 6, 2020
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
Copyright © 2026 Bayalu