Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
Copyright © 2026 Bayalu