Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಮಾತು ಮಾಯೆ
Share:
Poems

ಮಾತು ಮಾಯೆ

July 4, 2021 ಕೆ.ಆರ್ ಮಂಗಳಾ
ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave a Reply to ಶೋಭಾದೇವಿ ಅಮರಶೆಟ್ಟಿ, ಧಾರವಾಡ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ನೆಲದ ನಿಧಾನ
ನೆಲದ ನಿಧಾನ
April 29, 2018
ಹುಡುಕಾಟ…
ಹುಡುಕಾಟ…
August 8, 2021
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಗ್ರಹಣ
ಗ್ರಹಣ
December 9, 2025
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
Copyright © 2025 Bayalu