Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದ್ದೇನೆ ನಾನು?
Share:
Poems February 10, 2023 ಕೆ.ಆರ್ ಮಂಗಳಾ

ಎಲ್ಲಿದ್ದೇನೆ ನಾನು?

ನರನಾಡಿಗಳಲ್ಲೋ
ರಕ್ತ ಮಾಂಸಗಳಲ್ಲೋ
ಮಿದುಳಿನಲೋ ಹೃದಯದಲೋ,
ಚರ್ಮದ ಹೊದಿಕೆಯಲೋ
ಎಲ್ಲಿದ್ದೇನೆ ನಾನು?

ಬಾಡುವ ದೇಹದಲೋ
ಬದಲಾಗೋ ವಿಚಾರಗಳಲೋ
ಬೆಂಬಿಡದ ಭಾವಗಳಲ್ಲೋ
ಬೇರೂರಿದ ನಂಬಿಕೆಗಳಲ್ಲೋ
ಎಲ್ಲಿದ್ದೇನೆ ನಾನು?

ಈ ಹೊತ್ತು ಎಂಬುದೇ
ಕೈಗೆಟುಕದಿರುವಾಗ
ಸರಿವ ಕ್ಷಣಗಳಲ್ಲೋ
ಬರುವ ಗಳಿಗೆಗಳಲ್ಲೋ
ಎಲ್ಲಿದ್ದೇನೆ ನಾನು?

ಕಟ್ಟಿದ್ದು ಮರೆಯುತ್ತಾ
ಕೆಡವಿದ್ದು ತುಳಿಯುತ್ತಾ
ಕಟ್ಟುತ್ತಾ ಕೆಡವುತ್ತಾ
ಆಡುವಾಟವೇ ಇಲ್ಲವಾಗಿರಲು
ಎಲ್ಲಿದ್ದೇನೆ ನಾನು?

ಎಲ್ಲಿಂದ ಬಂದದ್ದು
ಎಲ್ಲಿಗೆ ಹೊರಟದ್ದು
ಯಾರು ಯಾರಿಗೆ ಸಾಕ್ಷಿ
ನಿಲಲೊಲ್ಲದ ನಡಿಗೆಯಲಿ
ಎಲ್ಲಿದ್ದೇನೆ ನಾನು?

ಹೆತ್ತವರು ಹೇಳಲಿಲ್ಲ
ನೆರೆದವರು ತಿಳಿಸಲಿಲ್ಲ
ಪುಸ್ತಕದಿ ಬರೆದಿಲ್ಲ
ಪಾಠದಲಿ ಓದಲಿಲ್ಲ
ಎಲ್ಲಿದ್ದೇನೆ ನಾನು?

ಕಣ್ತೆರೆದು ಹುಡುಕಿದರೂ
ಕಣ್ಮುಚ್ಚಿ ಕುಳಿತರೂ
ಹಗಲಲ್ಲಿ ಕಾಣಲಿಲ್ಲ
ರಾತ್ರಿಯಲಿ ಜೊತೆಗಿಲ್ಲ
ಎಲ್ಲಿದ್ದೇನೆ ನಾನು?

ಭವದೊಳಗೆ ಮುಳುಗಿ
ಕದಳಿಯಲಿ ಕಳೆದು
ಗುರು ಕೃಪೆಗೆ ಬಾಯಾರಿ
ಬಯಲ ಬಡಬಡಿಸುವ ಜೀವ
ಎಲ್ಲಿರುವೆ ನೀನು?

Previous post ಕಣ್ಣ ಪರಿಧಿ
ಕಣ್ಣ ಪರಿಧಿ
Next post ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ

Related Posts

ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...

Comments 4

  1. ಸುನಂದಾ ರಾಚಣ್ಣ, ದಾವಣಗೆರೆ
    Feb 11, 2023 Reply

    ಮನದಾಳದ ಭಾವಗಳನ್ನೆಲ್ಲಾ ದಾಟಿ ಗುರಿಯತ್ತ ಸಾಗಿರುವೆ… ಸರಿವ ಕ್ಷಣಗಳ, ಬರುವ ಗಳಿಗೆಗಳ ಕಟ್ಟುತ್ತಾ ಕೆಡವುತ್ತಾ ಮುಂದೆ ಸಾಗಿ, ಗುರು ಪಾದಕ್ಕೆ ಅರ್ಪಿತಳಾಗಿರುವೆ… ಎಲ್ಲಿಂದ ಬಂದು ಅದೆಲ್ಲಿಗೆ ಹೋಗುವ ಹಂಬಲ? ಬಯಲಾಗುವ ತುಡಿತ… ಹೇಗೆ ಬರೆದೆ? ಒಂದೊಂದು ಹಂತ ದಾಟಿ ಗುರುಗೆ, ಗುರಿಗೆ ಹತ್ತಿರಾಗುತಿರುವೆ… ಈ ಪಯಣ ನನ್ನ ಕಲ್ಪನೆಗೂ ಮೀರಿದ್ದು ಮಗಳೇ!!!
    ✍🏼 ಸುನಂದಾ ಕಪ್ಪರದ

  2. VEERESH
    Feb 11, 2023 Reply

    ಅದ್ಭುತ ಬರಹ ಮೇಡಂ👌🏻👌🏻👌🏻

  3. Venkatesh
    Feb 11, 2023 Reply

    🙏

  4. ಶೋಭಾದೇವಿ ಅಮರಶೆಟ್ಟಿ, ಭಾಲ್ಕಿ
    Feb 13, 2023 Reply

    “ಪ್ರತಿ ಪದವೂ ನಮ್ಮೊಳಗಿನ. ನಮ್ಮನ್ನು ಹುಡುಕುವಂತೆ ಮಾಡುತ್ತದೆ ,ಎಲ್ಲಿದ್ದೇನೆ ನಾನು ಕವನ. 👌👌👍👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಲಿಂಗಾಚಾರ
ಲಿಂಗಾಚಾರ
May 6, 2021
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಗಂಟಿನ ನಂಟು
ಗಂಟಿನ ನಂಟು
November 7, 2020
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
Copyright © 2026 Bayalu