Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ನನ್ನ ಬುದ್ಧ ಮಹಾಗುರು
Share:
Poems

ನನ್ನ ಬುದ್ಧ ಮಹಾಗುರು

January 4, 2020 ಪದ್ಮಾಲಯ ನಾಗರಾಜ್
ನನ್ನ ಬುದ್ಧ ಮಹಾಗುರುವು… ಧರ್ಮವಲ್ಲ ದೈವವಲ್ಲ ನುಡಿಯಲ್ಲ ಪಡಿಯಲ್ಲ ವಿಗ್ರಹವಲ್ಲ ಅನುಗ್ರಹವಲ್ಲ ಸಂಭ್ರಮವಲ್ಲ ಉತ್ಸವವಲ್ಲ ಸುಖವಲ್ಲ ದುಃಖವಲ್ಲ ವಾದವಲ್ಲ ಬೇಧವಲ್ಲ ಮಂತ್ರವಲ್ಲ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗಣ ಮರ
ಒಳಗಣ ಮರ
March 12, 2022
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
ಸತ್ಯ ಸಂಶೋಧನಾ ಲೇಖನ – ಒಂದು ಹೊಸ ಹೆಜ್ಜೆ
April 29, 2018
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ನಾನು ಯಾರು?
ನಾನು ಯಾರು?
December 8, 2021
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
Copyright © 2026 Bayalu