Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ನೆಲದ ನಿಧಾನ
Share:
Poems

ನೆಲದ ನಿಧಾನ

April 29, 2018 ಕೆ.ಆರ್ ಮಂಗಳಾ
ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
Copyright © 2026 Bayalu