Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಹೀಗೊಂದು ತಲಪರಿಗೆ (ಭಾಗ-5)
ಹೀಗೊಂದು ತಲಪರಿಗೆ (ಭಾಗ-5)
December 8, 2021
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಗುರುವಂದನೆ
ಗುರುವಂದನೆ
October 13, 2022
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
Copyright © 2026 Bayalu