Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...
ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ನೆಮ್ಮದಿ
ನೆಮ್ಮದಿ
April 6, 2020
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಅನುಭವ ಮಂಟಪ
ಅನುಭವ ಮಂಟಪ
April 11, 2025
ವೀರ
ವೀರ
April 29, 2018
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
Copyright © 2026 Bayalu