Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
Copyright © 2026 Bayalu