Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ
February 16, 2026
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
ಮಿತ್ರ-ಶತೃಗಳಿರುವುದು ನಡಾವಳಿಕೆಯಲ್ಲಿ
September 7, 2021
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
Copyright © 2026 Bayalu