Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
ನನ್ನನ್ನು ಕ್ಷಮಿಸು
Share:
Poems

ನನ್ನನ್ನು ಕ್ಷಮಿಸು

April 5, 2026 ಜ್ಯೋತಿಲಿಂಗಪ್ಪ
ಆಸೆಗಳಿರಲು ಆತಂಕ ನಿಲ್ಲದು ಆಯುಷ್ಯ ಇಳಿಯುವಾಗ ಆಯುಷ್ಯ ರೇಖೆಯ ಹುಡುಗಾಟ ಹುಟ್ಟಿದರೆ ಸಾವು ಹುಟ್ಟದಿರೆ ಸಾವಿಲ್ಲ ಸಾವಿಗೇನು ಕೇಡೇ… ಸಂತೆಯ ಸದ್ದಿನಲಿ ಸಂತನಾಗುವೆಯಾದರೆ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಹುಡುಕಾಟ
ಹುಡುಕಾಟ
July 21, 2024
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ನಾನು… ನನ್ನದು
ನಾನು… ನನ್ನದು
July 4, 2021
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಗುಟುಕು ಆಸೆ…
ಗುಟುಕು ಆಸೆ…
May 8, 2024
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
Copyright © 2026 Bayalu