Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಂದಾಗಿ ನಿಂತೆ…
Share:
Poems April 6, 2024 ಕೆ.ಆರ್ ಮಂಗಳಾ

ಒಂದಾಗಿ ನಿಂತೆ…

ಆಗೀಗ ನೀರು ಕಾಣುವ
ಮಧುಮಾಲತಿ ಬಳ್ಳಿಯಲಿ
ತೊನೆವ ಕೆಂಪು-ಬಿಳಿ ಹೂಗಳು
ಪಕ್ಕದಲ್ಲೇ ನಸುಗಂಪಿನ
ದುಂಡು ಮಲ್ಲಿಗೆಯ ದಂಡು
ದೇಟಿನ ತುಂಬ ಬಣ್ಣಬಣ್ಣದ ದಾಸವಾಳ,
ಅರೆಬೆತ್ತಲಾದ ಸಂಪಿಗೆ ಮರದಲೂ
ಉಳಿದೆಲೆಗಳ ನಡುವೆ
ನಗುವ ಹಳದಿ ಘಮಲು,
ಎಲೆಯೊಂದಿಗೆ ಹೂಗಳನ್ನೂ
ಉದುರಿಸಿಕೊಳ್ಳುತಿರುವ ಚೆರ್ರಿ ಬ್ಲಾಸಂ
ಹಸಿರುಗಿಣಿಗಳು, ಚಿಟಗುಬ್ಬಿ, ಚಿಟ್ಟೆಗಳು
ನೀರ ಬಾನಿಯಲಿ
ರೆಕ್ಕೆ ಬಿಚ್ಚಿ ಮುಳಿಗೇಳುವ
ಕಾಗೆ, ಗುಬ್ಬಿ, ಪಾರಿವಾಳಗಳು…

ಎಲ್ಲಿಂದಲೋ ಹಾರಿ ಬಂದ
ಜೋಡಿ ಬುಲ್ಬುಲ್ ಹಕ್ಕಿಗಳು
ಇಳಿಬಿದ್ದ ಪೊದೆಯ ಮರೆಯಲಿದ್ದ
ಹಳೇ ಗೂಡ ಪತ್ತೆಹಚ್ಚಿ
ಕಡ್ಡಿ ಸೇರಿಸಿ, ಎಲೆ ಹೆಣೆದು,
ಭದ್ರಗೊಳಿಸಿ, ಒಪ್ಪವಾಗಿಸಿ
ಮೊಟ್ಟೆ ಇಟ್ಟು ಕಾವು ಕೊಡುತಿದ್ದರೆ
ಎಟುಕದ ಗೂಡಿಗೆ ಗೋಣೆತ್ತಿ
ಮಣ್ಣಿಗೆ ಮೈಯಾನಿಸಿ ಮಲಗಿದ
ತುಂಟ ಬೆಕ್ಕು…
ದೂರದಿಂದ ತೇಲಿ ಬರುತಿರುವ
ಕೋಗಿಲೆಯ ಕುಹೂ…ಕುಹೂ…

ಹೊರಗೆ ಸುರಿವ ಬಿಸಿಲು
ಒಳಗೆ ಕುದಿವ ಧಗೆ
ವಸಂತಕೆ ನುಗ್ಗಿದ
ಗ್ರೀಷ್ಮದುರಿಗೆ ಕಾದು
ಹಂಚಾಗಿರುವ ನೆಲಕೊರಗಿದ
ಹಣ್ಣೆಲೆಗಳ-ಹೂಗಳ ಹಾಸುಗೆ
ಭಾಷೆಯೇ ಬೇಕಿಲ್ಲದ
ಮಾತು ಮುಟ್ಟದ
ಅಕ್ಷರಗಳ ಹಂಗಿಲ್ಲದ
ಋತುಗಳ ಗತಿಗೆ
ಜೀವದ ಚಲನೆಗೆ
ನಡೆ ಇದೆ, ಶಬ್ದವೆಲ್ಲಿದೆ?

ನಿಸರ್ಗದ ನಡೆಯ ದನಿಗೆ
ಕಿವಿಯಾಗಿ, ಕಣ್ಣಾಗಿ…
ಒಂದಾಗಿ ನಿಂತೆ ಈ ಗಳಿಗೆ!

Previous post ಕೇಳಿಸಿತೇ?
ಕೇಳಿಸಿತೇ?
Next post ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...

Comments 2

  1. Chinmayi
    Apr 7, 2024 Reply

    ಸರಳ, ಸುಂದರ

  2. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Apr 16, 2024 Reply

    ಯುಗಾದಿ ಸಮಯದಲ್ಲಿ ಎಲ್ಲ ಗಿಡ ಮರಗಳು ಚಿಗುರಿದಾಗ ವಿವಿಧ ಬಣ್ಣಗಳ ಬೇರೆ ಬೇರೆ ಹಲವು ಪರಿಮಳಗಳಿಂದ ತುಂಬಿದ ನಿಸರ್ಗದ ಹೊಸತನವು ‘ಒಂದಾಗಿ ನಿಂತೆ’ ಕವನದಲ್ಲಿ ತುಂಬಾ ಸೊಗಸಾಗಿ ಬಂದಿದೆ👌👌👍👍🙂

Leave a Reply to ಶೋಭಾದೇವಿ ಅಮರಶೆಟ್ಟಿ, ಧಾರವಾಡ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ತತ್ವಪದಗಳ ಜಾಡು ಹಿಡಿದು…
ತತ್ವಪದಗಳ ಜಾಡು ಹಿಡಿದು…
October 6, 2020
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
Copyright © 2025 Bayalu