Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...
ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಭಾರ
ಭಾರ
October 6, 2020
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
Copyright © 2025 Bayalu