Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಗುಟುಕು ಆಸೆ…
ಗುಟುಕು ಆಸೆ…
May 8, 2024
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಅಂದು-ಇಂದು
ಅಂದು-ಇಂದು
December 8, 2021
Copyright © 2026 Bayalu